ನಾಗಠಾಣ ಕ್ಷೇತ್ರ: ಮೀಸಲು ಕ್ಷೇತ್ರದಲ್ಲಿ ಯಾವ ಪಕ್ಷದಿಂದ ಯಾವ ಅಭ್ಯರ್ಥಿ | Oneindia Kannada

By : Oneindia Kannada

Published On: 2018-01-13

408 Views

01:09

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿ ಗುರುತಿಸಿಕೊಂಡ ನಾಗಠಾಣ, ವಿಜಯಪುರ ಜಿಲ್ಲೆಯ ಒಂದು ಪ್ರಮುಖ ವಿಧಾನಸಭಾ ಕ್ಷೇತ್ರ. ಐತಿಹಾಸಿಕವಾಗಿಯೂ ಈ ಸ್ಥಳ ಹಲವು ಮಹತ್ವಗಳನ್ನು ಹೊಂದಿದೆ. ಬೀರಸಿದ್ದೇಶ್ವರ, ಉದಯೇಶ್ವರ, ಮಲ್ಲಿಕಾರ್ಜುನ ಸ್ವಾಮಿ ಎಂಬ ಮೂರು ದೇವಾಲಯಗಳು ಇಲ್ಲಿ ಪ್ರಸಿದ್ಧಿ ಪಡೆದಿವೆ. ಬೀರಸಿದ್ದೇಶ್ವರ ಮತ್ತು ಪರಮಾನಂದ ಜಾತ್ರೆಗಳನ್ನು ಪ್ರತಿ ವರ್ಷ ದೀಪಾವಳಿಯ ಸಮಯದಲ್ಲಿ ಆಚರಿಸಲಾಗುತ್ತದೆ.ವಿಜಯಪುರ-ಇಂಡಿ ರಸ್ತೆಯಲ್ಲಿ ಈ ಊರು ನೆಲೆಸಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವುದರಿಂದ ಈ ಊರಿನ ಮೇಲೆ ಮರಾಠಿ ಪ್ರಭಾವ ಸಾಕಷ್ಟಿದೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಈ ಕ್ಷೇತ್ರವನ್ನು 2013 ರಲ್ಲಿ ಕಾಂಗ್ರೆಸ್ ನ ಪ್ರೊ.ರಾಜು ಆಲಗೂರು ಪ್ರತಿನಿಧಿಸಿದ್ದರು. ಈ ಬಾರಿಯೂ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ. ಕಳೆದ ಚುನಾವಣೆಯಲ್ಲಿ ರಾಜು ಅವರ ವಿರುದ್ಧ ಸೋತಿದ್ದ ಜೆಡಿಎಸ್ ನ ಪುಲಸಿಂಗ್ ಚೌಹಾಣ್ ಕೂಡ ಮರಳಿ ಯತ್ನ ಮಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಇನ್ನು ತಿಳಿಯಬೇಕಷ್ಟೆ.
The constituency of Nagthana in Bijapur was reserved for scheduled castes since 2013 . Which all candidates are contesting from which all parties ?

Trending Videos - 24 April, 2024

RELATED VIDEOS

Recent Search - April 24, 2024